ವಿಕಿಸೋರ್ಸ್
knwikisource
https://kn.wikisource.org/wiki/%E0%B2%AE%E0%B3%81%E0%B2%96%E0%B3%8D%E0%B2%AF_%E0%B2%AA%E0%B3%81%E0%B2%9F
MediaWiki 1.39.0-wmf.21
first-letter
ಮೀಡಿಯ
ವಿಶೇಷ
ಚರ್ಚೆಪುಟ
ಸದಸ್ಯ
ಸದಸ್ಯರ ಚರ್ಚೆಪುಟ
ವಿಕಿಸೋರ್ಸ್
ವಿಕಿಸೋರ್ಸ್ ಚರ್ಚೆ
ಚಿತ್ರ
ಚಿತ್ರ ಚರ್ಚೆಪುಟ
ಮೀಡಿಯವಿಕಿ
ಮೀಡೀಯವಿಕಿ ಚರ್ಚೆ
ಟೆಂಪ್ಲೇಟು
ಟೆಂಪ್ಲೇಟು ಚರ್ಚೆ
ಸಹಾಯ
ಸಹಾಯ ಚರ್ಚೆ
ವರ್ಗ
ವರ್ಗ ಚರ್ಚೆ
ಸಂಪುಟ
ಸಂಪುಟ ಚರ್ಚೆ
ಕರ್ತೃ
ಕರ್ತೃ ಚರ್ಚೆ
ಪುಟ
ಪುಟ ಚರ್ಚೆ
ಪರಿವಿಡಿ
ಪರಿವಿಡಿ ಚರ್ಚೆ
TimedText
TimedText talk
ಮಾಡ್ಯೂಲ್
ಮಾಡ್ಯೂಲ್ ಚರ್ಚೆ
Gadget
Gadget talk
Gadget definition
Gadget definition talk
ಹರಿಭಕ್ತಿಸಾರ
0
37820
246644
182762
2022-07-21T16:01:59Z
Sb1966
47
wikitext
text/x-wiki
{| class="wikitable"
|-style=*bgcolor="#e4e8ff"
| <[[ಕನಕದಾಸರ ಸಾಹಿತ್ಯ]]
:<[[ತಾತ್ವಿಕ ಸಾಹಿತ್ಯ]]
===ಕನಕದಾಸ ವಿರಚಿತ ಹರಿಭಕ್ತಿಸಾರ (ಸಂಗ್ರಹ)===
<poem>
ಶ್ರೀಯರಸ ಗಾಂಗೇಯನುತ ಕೌಂ
ತೇಯವಂದಿತಚಲರಣ ಕಮಲದ
ಳಾಯತಾಂಬಕರೂಪ ಚಿನ್ಮಯ ದೇವಕೀತನಯ
ರಾಯ ರಘುಕುಲವರ್ಯ ಭೂಸುರ
ಪ್ರೀಯ ಸುರಪುರನಿಲಯ ಚೆನ್ನಿಗ
ರಾಯ ಚತುರೋಪಾಯ ರಕ್ಷಿಸು ನಮ್ಮನನವರತ॥೧॥
ದೇವದೇವ ಜಗದ್ಭರಿತ ವಸು
ದೇವಸುತ ಜಗದೇಕನಾಥ ರ
ಮಾವಿನೋದಿತ ಸಜ್ಜನಾನತ ನಿಖಿಲಗುಣಭರಿತ
ಭಾವಜಾರಿಪ್ರಿಯ ನಿರಾಮಯ
ರಾವಣಾಂತಕ ರಘುಕುಲಾನ್ವಯ
ದೇವ ಅಸುರವಿರೋಧಿ ರಕ್ಷಿಸು ನಮ್ಮನನವರತ॥೨॥
ಅನುಪಮಿತಚಾರಿತ್ರ ಕರುಣಾ
ವನಧಿ ಭಕ್ತಕುಟುಂಬಿ ಯೋಗೀ
ಜನಹೃದಯಪರಿಪೂರ್ಣ ನಿತ್ಯಾನಂದ ನಿಗಮನುತ
ವನಜನಾಭ ಮುಕುಂದ ಮುರಮ
ರ್ದನ ಜನಾರ್ದನ ತ್ರೈಜಗತ್ಪಾ
ವನ ಸುರಾರ್ಚಿತ ದೇವ ರಕ್ಷಿಸು ನಮ್ಮನನವರತ॥೩॥
ಕಮಲಸಂಭವನಿನುತ ವಾಸವ
ನಮಿತ ಮಂಗಳ ಚರಿತ ದುರಿತ
ಕ್ಷಮಿತ ರಾಘವ ವಿಶ್ವಪೂಜಿತ ವಿಶ್ವ ವಿಶ್ವಮಯ
ಅಮಿತವಿಕ್ರಮ ಭೀಮ ಸೀತಾ
ರಮಣ ವಾಸುಕಿಶಯನ ಖಗವತಿ
ಗಮನ ಕಂಜಜನಯ್ಯ ರಕ್ಷಿಸು ನಮ್ಮನನವರತ ॥೪॥
ಕ್ಷೀರವಾರಿಧಿಶಯನ ಶಾಂತಾ
ಕಾರಾ ವಿವಿಧವಿಚಾರ ಗೋಪೀ
ಜಾರ ನವನೀತಚೋರ ಚಕ್ರಾಧಾರ ಭವದೂರ
ಮಾರಪಿತ ಗುಣಹಾರ ಸರಸಾ
ಕಾರ ರಿಪುಸಂಹಾರ ತುಂಬುರ
ನಾರದಪ್ರಿಯ ವರದ ರಕ್ಷಿಸು ನಮ್ಮನನವರತ ॥೫॥
ಭಕ್ತಿಸಾರದ ಚರಿತೆಯನು ಹರಿ
ಭಕ್ತರಾಲಿಸುವಂತೆ ರಚಿಸುವೆ
ಯುಕ್ತಿಯಲಿ ಬರೆದೋದಿದವರಿಷ್ಟಾರ್ಥ ಸಿದ್ಧಪುದು
ಮುಕ್ತಿಗಿದು ನೆಲೆದೋರುವುದು ಹರಿ
ಭಕ್ತರಿದ ಲಾಲಿಪುದು ನಿಜಮತಿ
ಭಕ್ತಿಗೊಲಿವಂದದಲಿ ರಕ್ಷಿಸು ನಮ್ಮನನವರತ॥೧೮॥
ಗಿಳಿಯ ಮರಿಯನು ತಂದು ಪಂಜರ
ದೊಳಗೆ ಪೋಷಿಸಿ ಕಲಿಸಿ ಮೃದುನುಡಿ
ಗಳನು ಲಾಲಿಸಿ ಕೇಳ್ವ ಪರಿಣತರಂತೆ ನೀನೆನಗೆ
ತಿಳುಹು ಮತಿಯನು ಎನ್ನ ಜಿಹ್ವೆಗೆ
ಮೊಳಗುವಂದದಿ ನಿನ್ನ ನಾಮಾ
ವಳಿಯ ಪೊಗಳಿಕೆಯಿತ್ತು ರಕ್ಷಿಸು ನಮ್ಮನನವರತ॥೨೦॥
ವೇದಶಾಸ್ತ್ರ ಪುರಾಣ ಪುಣ್ಯದ
ಹಾದಿಯನು ನಾನರಿಯೆ ತರ್ಕದ
ವಾದದಲಿ ಗುರುಹಿರಿಯರರಿಯದ ಮೂಢಮತಿಯೆನಗೆ
ಆದಿಮೂರುತಿ ನೀನು ನೆರೆ ಕರು
ಣೋದಯನು ಹೃದಯಾಂಗಣದಿ ಜ್ಞಾ
ನೋದಯವನೆನಗಿತ್ತು ರಕ್ಷಿಸು ನಮ್ಮನನವರತ॥೨೨॥
ಹಸಿವರಿತು ತಾಯ್ ತನ್ನ ಶಿಶುವಿಗೆ
ಒಸೆದು ಮೊಲೆ ಕೊಡುವಂತೆ ನೀ ಪೋ
ಷಿಸದೆ ಬೇರಿನ್ನಾರು ಪೋಷಕರಾಗಿ ಸಲಹುವರು
ಬಸಿರೊಳಗೆ ಬ್ರಹ್ಮಾಂಡಕೋಟಿಯ
ಪಸರಿಸಿದ ಪರಮಾತ್ಮ ನೀನೆಂ
ದುಸಿರುತಿದೆ ವೇದಗಳು ರಕ್ಷಿಸು ನಮ್ಮನನವರತ॥೨೩॥
ಇಬ್ಬರಣುಗರು ನಿನಗೆಯವರೊಳ
ಗೊಬ್ಬ ಮಗನೀರೇಳು ಲೋಕದ
ಹೆಬ್ಬೆಳಸು ಬೆಳೆವಂತೆ ಕಾರಣಕರ್ತನಾದವನು
ಒಬ್ಬ ಮಗನದ ಬರೆವ ಕರಣಿಕ
ರಿಬ್ಬರೆ ಲೋಕಪ್ರಸಿದ್ಧರು
ಹಬ್ಬಿಸಿದೆ ಪ್ರಾಣಿಗಳ ರಕ್ಷಿಸು ನಮ್ಮನನವರತ॥೨೪॥
ಸಿರಿಯು ಕುಲಸತಿ ಸುತನು ಕಮಲಜ
ಹಿರಿಯ ಸೊಸೆ ಶಾರದೆ ಸಹೋದರಿ
ಗಿರಿಜೆ ಮೈದುನ ಶಂಕರನು ಸುರರೆಲ್ಲ ಕಿಂಕರರು
ನಿರುತ ಮಾಯೆಯು ದಾಸಿ ನಿಜ ಮಂ
ದಿರವಜಾಂಡವು ಜಂಗಮಸ್ಥಾ
ವರಕುಟುಂಬಿಗ ನೀನು ರಕ್ಷಿಸು ನಮ್ಮನನವರತ॥೨೫॥
ಸಾಗರನ ಮಗಳರಿಯದಂತೆ ಸ
ರಾಗದಲಿ ಸಂಚರಿಸುತಿಹವು
ದ್ಯೋಗವೇನು ನಮಿತ್ತ ಕಾರಣವಿಲ್ಲ ಲೋಕದಲಿ
ಭಾಗವತರಾದವರ ಸಲಹುವ
ನಾಗಿ ಸಂಚರಿಸುವುದು ಈ ಭವ
ಸಾಗರದಿ ಮುಳುಗಿಸದೆ ರಕ್ಷಿಸು ನಮ್ಮನನವರತ॥೨೬॥
ಬಲಿಯ ಬಂಧಿಸಿ ಮೊರೆಯಿಡುವ ಸತಿ
ಗೊಲಿದು ಅಕ್ಷಯವಿತ್ತು ಕರುಣದಿ
ಮೊಲೆಯನುಣಿಸಿದ ಬಾಲಿಕೆಯ ಪಿಡಿದಸುವನಪಹರಿಸಿ
ಶಿಲೆಯ ಸತಿಯಳ ಮಾಡಿ ತ್ರಿಪುರದ
ಲಲನೆಯರ ವ್ರತಗೆಡಿಸಿ ಕೂಡಿದ
ಕೆಲಸವುತ್ಸತಮವಾಯ್ತು ರಕ್ಷಿಸು ನಮ್ಮನನವರತ॥೩೦॥
ಏನುಮಾಡಿದಡೇನು ಕರ್ಮವ
ನೀನೊಲಿಯದಿನ್ನಿಲ್ಲವಿದಕನು
ಮಾನವುಂಟೆ ಭ್ರಮರಕೀಟನ್ಯಾಯದಂದದಲಿ
ನೀನೊಲಿಯೆ ತೃಣ ಪರ್ವತವು ಪುಸಿ
ಯೇನು ನೀ ಪತಿಕರಿಸೆ ಬಳಿಕಿ
ನ್ನೇನು ಚಿಂತಿಸಲೇಕೆ ರಕ್ಷಿಸು ನಮ್ಮನನವರತ॥೪೦॥
ಎಷ್ಟುಮಾಡಲು ಮುನ್ನ ತಾ ಪಡೆ
ದಷ್ಟುಯೆಂಬುದ ಲೋಕದೊಳು ಮತಿ
ಗೆಟ್ಟ ಮಾನವರಾಡುತಿಹರಾ ಮಾತದಂತಿರಲಿ
ಪಟ್ಟವಾರಿಂದಾಯ್ತು ಧ್ರುವನಿಗೆ
ಕೊಟ್ಟ ವರ ತಪ್ಪಿತೆ ಕುಚೇಲನಿ
ಗಿಷ್ಟ ಬಾಂಧವ ನೀನು ರಕ್ಷಿಸು ನಮ್ಮನನವರತ॥೪೧॥
ದೀನ ನಾನು ಸಮಸ್ತ ಲೋಕಕೆ
ದಾನಿ ನೀನು ವಿಚಾರಿಸಲು ಮತಿ
ಹೀನ ನಾನು ಮಹಾಮಹಿಮ ಕೈವಲ್ಯಪತಿ ನೀನು
ಏನ ಬಲ್ಲೆನು ನಾನು ನೆರೆ ಸು
ಜ್ಞಾನಮೂರುತಿ ನೀನು ನಿನ್ನ ಸ
ಮಾನರುಂಟೆ ದೇವ ರಕ್ಷಿಸು ನಮ್ಮನನವರತ॥೪೯॥
ಧಾರಿಣಿಗೆ ವರ ಚಕ್ರವರ್ತಿಗ
ಳಾರು ಮಂದಿ ನೃಪಾಲಕರು ಹದಿ
ನಾರು ಮಂದಿಯು ಧರಣಿಯನು ಮುನ್ನಾಳ್ದ ನೃಪರೆನಿತೋ
ವೀರರನು ಮೆಚ್ಚಿದಳೆ ಧರಣೀ
ನಾರಿ ಬಹು ಮೋಹದೊಳು ನಿನ್ನನು
ಸೇರಿಯೋಲೈಸುವಳು ರಕ್ಷಿಸು ನಮ್ಮನನವರತ॥೫೨॥
ಗತಿವಿಹೀನರಿಗಾರು ನೀನೇ ನನ್ನ ವಿರುದ್ಧ
ಗತಿ ಕಣಾ ಪತಿಕರಿಸಿಕೊಡು ಸ
ದ್ಗತಿಯ ನೀನೆಲೆ ದೇವ ನಿನಗಪರಾಧಿ ನಾನಲ್ಲ
ಶ್ರುತಿವಚನವಾಡುವುದು ಶರಣಾ
ಗತನ ಸೇವಕನೆಂದು ನಿನ್ನನು
ಮತವಿಡಿದು ನಂಬಿದೆನು ರಕ್ಷಿಸು ನಮ್ಮನನವರತ॥೫೪॥
ಈಗಲೋ ಈ ದೇಹವಿನ್ನ್ಯಾ
ವಾಗಲೋ ನಿಜವಿಲ್ಲವೆಂಬುದ
ನೀಗ ತಿಳಿಯದೆ ಮಡದಿ ಮನೆ ಮನೆವಾರ್ತೆಯೆಂದೆಂಬ
ರಾಗಲೋಭದಿ ಮುಳುಗಿ ಮುಂದಣ
ತಾಗುಬಾಗುಗಳರಿಯೆ ನಿನ್ನ ಸ
ಮಾಗಮವ ಬಯಸುವೆನು ರಕ್ಷಿಸು ನಮ್ಮನನವರತ॥೫೫॥
ಮಾಂಸ ರಕ್ತದ ಮಡುವಿನಲಿ ನವ
ಮಾಸ ಜನನಿಯ ಜಠರದೊಳಗಿರು
ವಾ ಸಮಯದಲ್ಲಿ ವೃತ್ತಿಯನು ಕಲ್ಪಿಸಿದ ಪ್ರಭುವಾರು
ನೀ ಸಲಹಿದವನಲ್ವೇ ಕರು
ಣಣಾಸಮುದ್ರನು ನೀನಿರಲು ಕಮ
ಲಾಸನನ ಹಂಗೇಕೆ ರಕ್ಷಿಸು ನಮ್ಮನನವರತ॥೫೬॥
ಎತ್ತಿದೆನು ನಾನಾ ಶರೀರವ
ಹೊತ್ತು ಹೊತ್ತಲಸಿದೆನು ಸಲೆ ಬೇ
ಸತ್ತು ನಿನ್ನಯ ಪದವ ಕಾಣದೆ ತೊಳಲಿ ಬಳಲಿದೆನು
ಸತ್ತು ಹುಟ್ಟುವ ಹುಟ್ಟಿ ಹಿಂಗುವ
ಸುತ್ತ ತೊಡಕನು ಮಾಣಿಸಲೆ ಪುರು
ಷೋತ್ತಮನೆ ಮನವೊಲಿದು ರಕ್ಸಷಿಸು ನಮ್ಮನನವರತ॥೬೦॥
ಗಣನೆಯಿಲ್ಲದ ಜನನಿಯರು ಮೊಲೆ
ಯುಣಿಸಲಾ ಪಯಬಿಂದುಗಳನದ
ನೆಣಿಸಲಳವೇ ಸಪ್ತಸಾಗರಕಧಿಕವೆನಿಸಿಹುದು
ಬಣಗು ಕಮಲಜನದಕೆ ತಾನೇ
ಮಣೆಯಗಾರನು ಈತ ಮಾಡಿದ
ಕುಣಿಕೆಗಳ ನೀಬಿಡಿಸಿ ರಕ್ಷಿಸು ನಮ್ಮನನವರತ॥೬೨॥
ಎಂಟು ಗೇಣಿನ ದೇಹ ರೋಮಗ
ಳೆಂಟು ಕೋಟಿಯ ಕೀಲ್ಗಳರುವ
ತ್ತೆಂಟು ಮಾಂಸಗಳಿಂದ ಮಾಡಿದ ಮನೆಯ ಮನವೊಲಿದು
ನೆಂಟ ನೀನಿರ್ದಗಲಿದಡೆ ಒಣ
ಹೆಂಟೆಯಲಿ ಮುಚ್ಚುವರು ದೇಹದ
ಲುಂಟೆ ಫಲ ಪುರುಷಾರ್ಥ ರಕ್ಷಿ,ಸು ನಮ್ಮನನವರತ॥೬೬॥
ಕೋಪವೆಂಬುದು ತನುವಿನಲಿ ನೆರೆ
ಪಾಪ ಪಾತಕದಿಂದ ನರಕದ
ಕೂಪದಲಿ ಮುಳುಗುವುದು ತಪ್ಪದು ಶಾಸ್ತ್ರಸಿದ್ಧವಲೆ
ರಾಪು ಮಾಡದೆ ಬಿಡನು ಯಮನು ನಿ
ರಾಪರಾಧಿಯು ನೋಡಿ ಕೀರ್ತಿಕ
ಲಾಪವನು ನೀ ಕಾಯ್ದು ರಕ್ಷಿಸು ನಮ್ಮನನವರತ॥೬೮॥
ನೀರ ಮೇಲಣ ಗುಳ್ಳೆಯಂದದಿ
ತೋರಿಯಡಗುವ ದೇಹವೀ ಸಂ
ಸಾರ ಬಹಳಾರ್ಣವದೊಳಗೆ ಮುಳುಗಿದೆನು ಪತಿಕರಿಸಿ
ತೋರಿಸಚಲಾನಂದಪದವಿಯ
ಸೇರಿಸಕಟಾ ನಿನ್ನವೋಲ್ ನಮ
ಗಾರು ಬಾಂಧವರುಂಟು ರಕ್ಷಿಸು ನಮ್ಮನನವರತ॥೭೫॥
ತೊಗಲು ಬೊಂಬೆಗಳಂತೆ ನಾಲಕು
ಬಗೆಯ ನಿರ್ಮಾಣದಲಿ ಇದರೊಳು
ನೆಗಳದೀ ಚೌಷಷ್ಟಿ ಲಕ್ಷಣ ಜಾತಿ ಧರ್ಮದಲಿ
ಬಗೆಬಗೆಯ ನಾಮಾಂಕಿತದ ಜೀ
ವಿಗಳದೆಲ್ಲವು ನಿನ್ನ ನಾಮದಿ
ಜಗದಿ ತೋರುತ್ತಿಹುದು ರಕ್ಷಿಸು ನಮ್ಮನನವರತ॥೮೪॥
ಹೂಡಿದೆಲುಮರಮಟ್ಟು ಮಾಂಸದ
ಗೋಡೆ ಚರ್ಮದ ಹೊದಿಕೆ ನರವಿನ
ಕೂಡೆ ಹಿಂಡಿಗೆ ಬಿಗಿದ ಮನೆಯೊಳಗಾತ್ಮ ನೀನಿರಲು
ಬೀಡು ತೊಲಗಿದ ಬಳಿಕಲಾ ಸುಡು
ಗಾಡಿನಲಿ ಬೆಂದುರಿವ ಕೊಂಪೆಯ
ನೋಡಿ ನಂಬಿರಬಹುದೆ ರಕ್ಷಿಸು ನಮ್ಮನನವರತ॥೮೫॥
ಬೀಗಮುದ್ರೆಗಳಿಲ್ಲದೂರಿಗೆ
ಬಾಗಿಲುಗಳೊಂಬತ್ತು ಹಗಲಿರು
ಳಾಗಿ ಮುಚ್ಚದೆ ತೆರೆದಿಹುದು ಜೀವಾತ್ಮ ತಾನಿರುತ
ನೀಗಿಯೆಲ್ಲವ ಬಿಸುಟು ಬೇಗದಿ
ಹೋಗುತಿಹ ಸಮಯದಲಿ ಇವರವ
ರಾಗಬಲ್ಲರೆ ನೀನೆ ರಕ್ಷಿಸು ನಮ್ಮನನವರತ॥೮೬॥
ಎಂಜಲೆಂಜಲು ಎಂಬರಾ ನುಡಿ
ಎಂಜಲಲ್ಲವೆ ವಾರಿ ಜಲಚರ
ದೆಂಜಲಲ್ಲವೆ ಹಾಲು ಕರುವಿನ ಎಂಜಲೆನಿಸಿರದೆ
ಎಂಜಲೆಲ್ಲಿಯದೆಲ್ಲಿಯುಂ ಪರ
ರೆಂಜಲಲ್ಲದೆ ಬೇರೆ ಭಾವಿಸ
ಲೆಂಜಲುಂಟೇ ದೇವ ರಕ್ಷಿಸು ನಮ್ಮನನವರತ॥೧೦೧॥
ಕೇಳುವುದು ಹರಿಕಥೆಯ ಕೇಳಲು
ಹೇಳುವುದು ಹರಿಭಕ್ತಿ ಮನದಲಿ
ತಾಳುವುದು ಹಿರಿದಾಗಿ ನಿನ್ನಯ ಚರಣಸೇವೆಯಲಿ
ಊಳಿಗವ ಮಾಡುವುದು ವಿಷಯವ
ಹೂಳುವುದು ನಿಜ ಮುಕ್ತಕಾಂತೆಯ
ನಾಳುವುದು ಕೃಪೆಮಾಡಿ ರಕ್ಷಿಸು ನಮ್ಮನನವರತ॥೧೦೨॥
ನೂರು ಕನ್ಯಾದಾನವನು ಭಾ
ಗೀರಥೀಸ್ನಾನವನು ಮಿಗೆ ಕೈ
ಯಾರೆ ಗೋವ್ಗಳ ಪ್ರೇಮದಿಂದಲಿ ಭೂಸುರರಿಗೊಲಿದು
ಊರುಗಳ ನೂರಗ್ರಹಾರವ
ಧಾರೆಯೆರೆದಿತ್ತಂತೆ ಫಲ ಕೈ
ಸೇರುವುದು ಹರಿಭಕ್ತಿಸಾರದ ಕಥೆಯ ಕೇಳ್ದವಗೆ॥೧೦೬॥
</poem>
<ref>[https://knningaiah.blogspot.com/search/label/ನಳಚರಿತ್ರೆ ಹರಿಭಕ್ತಿಸಾರ (1)]</ref>
<ref>ಹರಿಭಕ್ತಿಸಾರವು- ಟಿ.ಕೆ.ಕೃಷ್ಣಸ್ವಾಮಿಶೆಟ್ಟಿ ಕಳಾನಿಧಿ ಬುಕ್ ಡಿಪೊ; ಚಿಕ್ಕಪೇಟೆ ಬೆಂಗಳೂರುಸಿಟಿ; ೧೯೪೯ (ಪ್ರಕಟಿತ- ಕ್ರಯ ೦-೨-೦)</ref>
(ಬಿಟ್ಟಿರುವ ಪದ್ಯಗಳನ್ನು ಸೇರಿಸಿ.)
===ನೋಡಿ===
*[[ಕನಕದಾಸರ ಸಾಹಿತ್ಯ]]
====ಪರಿವಿಡಿ====
{{ಪರಿವಿಡಿ}}
[[ವರ್ಗ:ಕನಕದಾಸರ ಸಾಹಿತ್ಯ]]
[[ವರ್ಗ:ಕನ್ನಡ ಸಾಹಿತ್ಯ]]
<!---೨೭-೧-೨೦೧೮ --->
|}
==ಉಲ್ಲೇಖ==
[[ವರ್ಗ:ಕನಕದಾಸರ ಸಾಹಿತ್ಯ]]
[[ವರ್ಗ:ಕನ್ನಡ ಸಾಹಿತ್ಯ]]
<!---೨೭-೧-೨೦೧೮ --->
mxybta7a0ak2a0y0vrd6zvqgbdgunbn